20.4 C
Bengaluru
Saturday, June 28, 2025

ಮೋದಿ ಸರ್ಕಾರದ 8 ವರ್ಷಗಳ 8 ಅತಿ ದೊಡ್ಡ ಸಾಧನೆಗಳು 2022

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದು ಎಂಟು ವರ್ಷಗಳು ಕಳೆದಿವೆ. ಹೆಚ್ಚಿನ ಸಾಧನೆಗಳನ್ನ ಮಾಡಿರುವ ಮೋದಿಯವರು ತಮ್ಮ ಆಡಳಿತಾವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.ಜನರಿಗಾಗಿ ಹಲವು ಯೋಜನೆಗಳನ್ನ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಆರ್ಥಿಕ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯ ವಿಷಯದಲ್ಲಿ ಸಮಾಜದ ಎಲ್ಲಾ ವರ್ಗಗಳಿಗೂ ನೇರವಾಗಿ ಪ್ರಯೋಜನವಾಗಲು ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ತಲುಪಿಸಿದೆ.

ಮೋದಿ ಅವರು ತಮ್ಮ ಎಂಟು ವರ್ಷಗಳ ಆಡಳಿತಾವಧಿಯಲ್ಲಿ ಅನೇಕ ಪ್ರಮುಖ ಯೋಜನೆಗಳು ಕೈಗೊಂಡಿದ್ದು, ಅವುಗಳು ಈ ಕೆಳಗಿನಂತಿವೆ.

1.ರಾಷ್ಟ್ರೀಯ ಶಿಕ್ಷಣ ನೀತಿ (NEP):

ಅಸ್ತಿತ್ವದಲ್ಲಿರುವ ಭಾರತೀಯ ಶಿಕ್ಷಣ ವ್ಯವಸ್ಥೆಯ ಎಲ್ಲಾ ಅಂಶಗಳನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ 2020ರ ಜು.29ರಂದು ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಜಾರಿ ಮಾಡಿತು. 2026ರ ವೇಳೆಗೆ ಈ ನೀತಿ ಸಂಪೂರ್ಣವಾಗಿ ಜಾರಿಯಾಗಲಿದೆ.

2.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ – ಕಿಸಾನ್) ಯೋಜನೆಯನ್ನು 2019 ರ ಫೆಬ್ರವರಿ 24 ರಂದು ಎಲ್ಲಾ ಭೂಹಿಡುವಳಿ ರೈತರ [ ಲ್ಯಾಂಡ್ ಹೋಲ್ಡಿಂಗ್ ಫಾರ್ಮರ್ ಗಳ] ಕುಟುಂಬಗಳಿಗೆ ಆದಾಯ ಬೆಂಬಲವನ್ನು ನೀಡಲು ಪ್ರಾರಂಭಿಸಲಾಯಿತು. ಯೋಜನೆಯಡಿ ಪ್ರತಿ ಆರ್ಥಿಕ, ಆರೋಗ್ಯ ಮತ್ತು ಸಾಮಾಜಿಕ ರೂ.ಗಳನ್ನು ಮೂರು ಸಮಾನ ಕಂತುಗಳಲ್ಲಿ ಎರಡು ಸಾವಿರ ರೂಪಾಯಿಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಯೋಜನೆಯಡಿ 1.80 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ವರ್ಗಾಯಿಸಲಾಗಿದೆ.

3.ಸ್ವಚ್ಛ ಭಾರತ್
“ಸ್ವಚ್ಛ ಭಾರತ- ಸ್ವಸ್ಥ ಭಾರತ” ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸನ್ನು ನನಸಾಗಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ 2ನೇ ಅಕ್ಟೋಬರ್ 2014ರಂದು ರಾಷ್ಟ್ರರಾಜಧಾನಿ ದೆಹಲಿಯ ರಾಜ್ ಘಾಟ್‌ನ ರಸ್ತೆಯೊಂದನ್ನು ಖುದ್ದು ಪೊರಕೆ ಹಿಡಿದು ಗುಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ಇಡೀ ದೇಶಾದ್ಯಂತ ಜನಾಂದೋಲನವನ್ನಾಗಿಸಿದರು. ಅಭಿಯಾನದ ಅಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಕಸ ಮುಕ್ತ ನಗರ ನಿರ್ಮಾಣಕ್ಕೆ ಸರ್ಕಾರ ಪಣ ತೊಟ್ಟಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ 1 ಲಕ್ಷ ರೂ.ವರೆಗೆ ದಂಡ ವಿಧಿಸಲು ತೀರ್ಮಾನಿಸಲಾಗಿದೆ.

4.ಪ್ರಧಾನ ಮಂತ್ರಿ ಆವಾಸ್ ಯೋಜನೆ
2015ರಲ್ಲಿ, ಭಾರತ ಸರ್ಕಾರ ಪ್ರಧಾನ ಮಂತ್ರಿ ಆವಾಸ್ (PMAY).ಹೆಸರಿನ ಯೋಜನೆಯನ್ನು ಆರಂಭಿಸಿತು.ಪಿಎಂಎವೈ ಯೋಜನೆ 2022ರ ವೇಳೆಗೆ ಎಲ್ಲರಿಗೂ ಕೈಗೆಟಕುವ ದರದಲ್ಲಿ ವಸತಿ ಒದಗಿಸುವ ಗುರಿ ಹೊಂದಿದೆ. ನಾವು ICICI ಹೋಂ ಫೈನಾನ್ಸ್‌ನಲ್ಲಿ, ಕೇಂದ್ರ ಸರ್ಕಾರದ “ಎಲ್ಲರಿಗೂ ವಸತಿ” ಯೋಜನೆಯೊಂದಿಗೆ ಕೈಜೋಡಿಸಿದ್ದೇವೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ(PMAY)ಯ ರೂಪುರೇಷೆಯಡಿ ಲಾಭಗಳನ್ನು ಒದಗಿಸುತ್ತಿದ್ದೇವೆ.ಪಿಎಂಎವೈ ಯೋಜನೆಯನ್ನು ಮೂರು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ, ಮೊದಲ ಎರಡು ಹಂತಗಳು ಪೂರ್ಣಗೊಂಡಿವೆ. ಪ್ರಸ್ತುತ, ಕೊನೆಯ ಹಂತ ಜಾರಿಯಲ್ಲಿದೆ; ಇದು 2019ರ ಏಪ್ರಿಲ್‌ 41ರಂದು ಅರಂಭಗೊಂಡಿದೆ, ಮತ್ತು 2022ರ ಮಾರ್ಚ್‌ 31ರಂದು ಪೂರ್ಣಗೊಳ್ಳಲಿದೆ.

5.ಬೇಟಿ ಬಚಾವೋ ಬೇಟಿ ಪಢಾವೋ:
ಹೆಣ್ಣು ಮಗುವಿನ ಉಳಿವು, ರಕ್ಷಣೆ ಮತ್ತು ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಹರಿಯಾಣದಲ್ಲಿ ಭಾರತದ ಪ್ರಧಾನ ಮಂತ್ರಿಯವರು 22 ಜನವರಿ 2015 ರಂದು ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯನ್ನು ಪ್ರಾರಂಭಿಸಿದರು. ಮಹಿಳಾ ಸಬಲೀಕರಣಕ್ಕೆ ವಿಶೇಷವಾಗಿ ಶಿಕ್ಷಣಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಅನಾವರಣಗೊಳಿಸಲಾಗಿದೆ.ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವುದು ಯೋಜನೆಯ ಉದ್ದೇಶವಾಗಿದೆ.

6.ಉಚಿತ ಗ್ಯಾಸ್ ಸಂಪರ್ಕ:
ಆರಂಭದಲ್ಲಿ, ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳ ಮಹಿಳೆಯರಿಗೆ LPG ಗ್ಯಾಸ್ ಸಂಪರ್ಕಗಳನ್ನು ಒದಗಿಸಲು PMUY ಅನ್ನು ಪ್ರಾರಂಭಿಸಲಾಯಿತು. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ಸೇರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು 2016 ರಲ್ಲಿ ‘ಉಜ್ವಲ ಯೋಜನೆ'(Ujjwala Yojana)ಯನ್ನು ಆರಂಭಿಸಿದರು. ಇದರ ಅಡಿಯಲ್ಲಿ, ದೇಶದ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ಒದಗಿಸಬೇಕು, ಇದರಿಂದ ಅವರು ಹೊಗೆ ಮುಕ್ತರಾಗಬಹುದು. ಈ ಉಜ್ವಲ ಯೋಜನೆಯನ್ನು ಪ್ರಧಾನಿ ಮೋದಿಯವರ 2.O ಸರ್ಕಾರವು ಆಗಸ್ಟ್ 25 ರಿಂದ ಉತ್ತರ ಪ್ರದೇಶದಲ್ಲಿ (ಯುಪಿ) ಆರಂಭಿಸಲಾಯಿತು.

7.ಅಗ್ನಿಪಥ್ ಯೋಜನೆ
ಭಾರತದ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಗ್ನಿಪಥ್ (Agnipath) ಎಂಬ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ. ಭಾರತೀಯ ಸೇನೆಯ 3 ವಿಭಾಗಗಳಲ್ಲಿ ಸೇವೆ ಸಲ್ಲಿಸುವ ನವ ಯುವಕ-ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿಯೇ ಈ ‘ಅಗ್ನಿಪಥ್’ ಯೋಜನೆ. ಅಗ್ನಿಪಥ್ ಭಾರತಿ ಕಾರ್ಯಕ್ರಮವು ಭಾರತೀಯ ನಾಗರಿಕರಿಗೆ ಸೇನಾ ನೇಮಕಾತಿ ಕಾರ್ಯಕ್ರಮವಾಗಿದೆ. ಈ ಯೋಜನೆಯು ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ.

8.ವಂದೇ ಭಾರತ್ ರೈಲು
ಮೈಸೂರು- ಬೆಂಗಳೂರು- ಚೆನ್ನೈ ವಂದೇ ಭಾರತ್ ರೈಲು ಸಂಚಾರ ಆರಂಭಗೊಂಡಿದೆ. ಸ್ವದೇಶಿ ನಿರ್ಮಿತ ಅತಿ ವೇಗದ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

 

Related News

spot_img

Revenue Alerts

spot_img

News

spot_img