Revenue Facts

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆಗೆ ನಿರ್ಧಾರ:

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್  ರಾವ್ ಬಿಜೆಪಿ ಸೇರ್ಪಡೆಗೆ ನಿರ್ಧಾರ:

ಬೆಂಗಳೂರು: ಬೆಂಗಳೂರು ಕಮಿಷನರ್ ಅಗಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರವರು ಪೊಲೀಸ್ ಇಲಾಖೆಗೆ ರಾಜೀನಾಮೇ ನೀಡಿ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದು ಈಗ ಎಎಪಿ ಪಕ್ಷ ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.ರಾವ್ ಅವರು ಕಳೆದ ವರ್ಷ ಬೆಂಗಳೂರು ನಗರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆಯೊಂದಿಗೆ ಎಎಪಿ ಸೇರಿದ್ದರು.

ಆದರೆ, ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರೊಂದಿಗಿನ ಅವರ ಸಂಬಂಧ ಅಷ್ಟೊಂದು ಸೌಹಾರ್ದಯುತವಾಗಿಲ್ಲ, ಏಕೆಂದರೆ ರಾಜ್ಯ ನಾಯಕತ್ವದ ಬಗ್ಗೆ ಉಭಯರ ನಡುವೆ ಜಟಾಪಟಿ ಇದ್ದುದರಿಂದ ರಾವ್ ಅವರನ್ನು ಪ್ರಣಾಳಿಕೆಯ ಅಧ್ಯಕ್ಷರನ್ನಾಗಿ ಮಾಡಿದ ರಾವ್ ರವರಿಗೆ ತೃಪ್ತಿ ತಂದಿರಲಿಲ್ಲ. ರಾವ್ ಅವರು ಬುಧವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

Exit mobile version