Revenue Facts

ಬೆಂಗಳೂರಲ್ಲಿ ಸಂಚಾರ ದಟ್ಟಣೆ ಶುಲ್ಕ ವಿಧಿಸಲು ತಜ್ಞರ ಸಲಹೆ

#Expert #advice # charging #traffic #congestion # Bangalore

ಬೆಂಗಳೂರು;ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ತಜ್ಞರ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರವಾಗಿ ವಾಹನಗಳ ಮೇಲೆ ‘ದಟ್ಟಣೆ ಶುಲ್ಕ’ ವಿಧಿಸುವ ಕಲ್ಪನೆಯನ್ನು ಮೊಬಿಲಿಟಿ ತಜ್ಞರು ಮುಂದಿಟ್ಟಿದ್ದಾರೆ. ಸಾರ್ವಜನಿಕರ ಮೇಲೆ ಹೇರುವ ಶುಲ್ಕವನ್ನು ಸಾರ್ವಜನಿಕ ಸಾರಿಗೆಯನ್ನು ಒದಗಿಸಲು ಮತ್ತು ಸುಧಾರಿಸಲು ಬಳಸಬೇಕು ಎಂದು ಸಲಹೆ ನೀಡಿದ್ದಾರೆ. ಟ್ರಾಫಿಕ್ ಸಮಸ್ಯೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ, ಕಳೆದ ವಾರದ ಹೊರ ವರ್ತುಲ ರಸ್ತೆ ನಲ್ಲಿ ಸಂಚಾರ ದಟ್ಟಣೆಯಾಗಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಸುದ್ದಿ ಮಾಡಿತ್ತು,ಹೆಚ್ಚು ಟ್ರಾಫಿಕ್ ಇರುವ ವೇಳೆ ಬೆಂಗಳೂರು ನಗರದ 9 ಮಾರ್ಗಗಳಲ್ಲಿ (ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕನಕಪುರ ರಸ್ತೆ, ಬನ್ನೇರುಘಟ್ಟ ರಸ್ತೆ, ಹೊಸೂರು ರಸ್ತೆ, ಹಳೆಯ ಮದ್ರಾಸ್ ರಸ್ತೆ, ಹಳೆಯ ವಿಮಾನ ನಿಲ್ದಾಣ ರಸ್ತೆ) ಸಂಚರಿಸುವ ವಾಹನಗಳಿಗೆ ತೆರಿಗೆ ವಿಧಿಸಲು ಚಿಂತನೆ ನಡೆಸಲಾಗಿದೆ.ಬೆಂಗಳೂರಿಗೆ ಪ್ರತಿನಿತ್ಯ 12 ಮಿಲಿಯನ್ ವಾಹನಗಳು ಬರುತ್ತಿವೆ. ದಟ್ಟಣೆ ಶುಲ್ಕವನ್ನು ವಿಧಿಸುವುದರೊಂದಿಗೆ, ನಗರವು ಗಣನೀಯ ಪ್ರಮಾಣದ ಆದಾಯವನ್ನು ಗಳಿಸುವ ನಿರೀಕ್ಷೆಯಿದೆ. ಈ ಆದಾಯವನ್ನು ನಗರದ ಸಾರಿಗೆ ರಚನೆಯನ್ನು ಹೆಚ್ಚಿಸಲು ಮರುಹೂಡಿಕೆ ಮಾಡಲು ಬಳಸಿಕೊಳ್ಳಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.ದಟ್ಟಣೆ ಶುಲ್ಕವನ್ನು ಸಂಗ್ರಹಿಸುವ ಸಲುವಾಗಿ, ಅಧಿಕಾರಿಗಳು ಫಾಸ್ಟ್ಯಾಗ್ ವ್ಯವಸ್ಥೆಯನ್ನು ಬಳಸಲು ಯೋಜಿಸುತ್ತಿದ್ದಾರೆ. ಇದು 2021 ರಿಂದ ಸಿಲಿಕಾನ್ ವ್ಯಾಲಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ವ್ಯವಸ್ಥೆಯು ಪ್ರಕ್ರಿಯೆಯನ್ನು ತಡೆರಹಿತ ಮತ್ತು ಪ್ರಯಾಣಿಕರಿಗೆ ಅನುಕೂಲಕರವಾಗಿಸುತ್ತದೆ ಮತ್ತು ಯೋಜನೆಯ ಸ್ವೀಕಾರ ಮತ್ತು ಯಶಸ್ಸಿಗೆ ಅನುಕೂಲವಾಗುತ್ತದೆ

Exit mobile version