Revenue Facts

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಜೈಶಂಕರ್

ಬೆಂಗಳೂರು, ಜು. 10 :ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‌ನ ರಾಜಧಾನಿ ಗಾಂಧಿನಗರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಗೋವಾ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ ಚುನಾವಣಾ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಅಯೋಗವು ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಜೈಶಂಕರ್ ಅವರು ಗುಜರಾತ್‌ನ ಗಾಂಧಿನಗರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 24 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ, ಜೈಶಂಕರ್ ಅವರು 2019 ರಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

 

ವಿದೇಶಾಂಗ ಸಚಿವ ಜೈಶಂಕರ್ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಇದ್ದರು. ಹಾಲಿ ರಾಜ್ಯಸಭಾ ಸಂಸದರು ಗುಜರಾತ್ ಅಸೆಂಬ್ಲಿ ಸಂಕೀರ್ಣಕ್ಕೆ ಆಗಮಿಸಿ ರಾಜ್ಯಗಳ ಪರಿಷತ್ತಿನ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರ ಮುಂದೆ ನಾಮಪತ್ರ ಸಲ್ಲಿಸಿದರು..ಬಿಜೆಪಿ ಹೊಂದಿರುವ ಎಂಟು ಸ್ಥಾನಗಳ ಪೈಕಿ ಎಸ್ ಜೈಶಂಕರ್, ಜುಗಲ್ಜಿ ಠಾಕೂರ್ ಮತ್ತು ದಿನೇಶ್ ಅನವಾಡಿಯಾ ಅವರ ಅವಧಿ ಆಗಸ್ಟ್ 18 ರಂದು ಕೊನೆಗೊಳ್ಳಲಿದೆ.ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‌ನ ರಾಜಧಾನಿ ಗಾಂಧಿನಗರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಗೋವಾ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ ಚುನಾವಣಾ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಅಯೋಗವು ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಜೈಶಂಕರ್ ಅವರು ಗುಜರಾತ್‌ನ ಗಾಂಧಿನಗರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 24 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ, ಜೈಶಂಕರ್ ಅವರು 2019 ರಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಈ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ನಾಮಪತ್ರ ಸಲ್ಲಿಸಿದ ನಂತರ ಜೈಶಂಕರ್, ನಾನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕತ್ವ, ಶಾಸಕರು ಮತ್ತು ಗುಜರಾತ್ ಜನತೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು. ಅವರ ಆಶೀರ್ವಾದದಿಂದ ಗುಜರಾತ್ ಅನ್ನು ಪ್ರತಿನಿಧಿಸಲು ಮತ್ತೊಂದು ಅವಕಾಶ ಸಿಗಲಿದೆ ಎಂದು ಅವರು ಹೇಳಿದರು.

Exit mobile version