26.1 C
Bengaluru
Saturday, April 26, 2025

ಲೋಕಾಯುಕ್ತ ದೂರುದಾರನಿಗೆ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ

ಬೆಂಗಳೂರು : ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುತ್ತಿಗೆದಾರೊಬ್ಬರಿಗೆ (Contractor) ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.ಗುತ್ತಿಗೆದಾರ ಮೋಹನ್ ಕುಮಾರ್ ಎಂಬುವರು ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದರು.ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ(Contractor) ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಅಕ್ರಮ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿದ ಅಧಿಕಾರಿಗಳು ಮೋಹನ್ ಕುಮಾರ್‌ಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.ಈ ಸಂಬಂಧ ಮೋಹನ್ ಕುಮಾರ್ ಕೋರ್ಟ್ನಲ್ಲಿ ಪಿಸಿಆರ್ ದಾಖಲಿಸಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related News

spot_img

Revenue Alerts

spot_img

News

spot_img