Revenue Facts

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಸದಸ್ಯ

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಸದಸ್ಯ

ಬೆಂಗಳೂರು: ಚಿತ್ರದುರ್ಗ (Chitradurg) ಜಿಲ್ಲೆಯ ಹಿರಿಯೂರು (Hiriyuru) ನಗರಸಭೆಯಲ್ಲಿ, ಇ-ಸ್ವತ್ತು ಮಾಡಿಸಿಕೊಡಲು 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ನಗರಸಭೆ ಸದಸ್ಯ ಮತ್ತು ಕ್ಲರ್ಕ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.ಲೋಕಾಯುಕ್ತ ಬಲೆಗೆ ಬಿದ್ದವರು ಹಿರಿಯೂರು ನಗರಸಭೆ ಪಕ್ಷೇತರ ಸದಸ್ಯ (Member) ಡಿ.ಸಣ್ಣಪ್ಪ ಹಾಗೂ ನಗರಸಭೆ ಕ್ಲರ್ಕ್ (Clerk) ರಮೇಶ್ ಎಂದು ತಿಳಿದುಬಂದಿದೆ.ಇವರು ಪಿ.ನಟರಾಜು ಎಂಬುವರ ಮನೆಯ ಇ-ಸ್ವತ್ತು ಮಾಡಿಕೊಡಲು 5 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ (Demand) ಇಟ್ಟಿದ್ದರು ಎನ್ನಲಾಗಿದೆ.ಹಿರಿಯೂರು ಬಸ್ ನಿಲ್ದಾಣದ ಬಳಿ ಮಂಗಳವಾರ ಬೆಳಿಗ್ಗೆ ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

Exit mobile version