26.3 C
Bengaluru
Thursday, April 24, 2025

ಲೋಕಾಯುಕ್ತ ದಾಳಿ ಬಿಸಿಎಂ ಇಲಾಖೆಯ ಪ್ರಭಾರ ಅಧಿಕಾರಿ ಬಂಧನ

ತುಮಕೂರು: ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಕಚೇರಿಗೆ ಪಡೆದಿದ್ದ ಕಾರಿನ ಬಾಡಿಗೆಯ ಬಿಲ್ ಮಂಜೂರು ಮಾಡಲು 34 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಸಿಎಂ ಇಲಾಖೆಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಶಿವರಾಜ್ ಎನ್. ಎಲಿಗಾರ್ ಬುಧವಾರ ಚಿಕ್ಕನಾಯಕನಹಳ್ಳಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಶಿವರಾಜ್ ಎಲಿಗಾರ್ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವ ವ್ಯಕ್ತಿ. ಬಿ ಸಿ ಎಂ ಇಲಾಖೆಗೆ ಬಾಡಿಗೆಗಾಗಿ ಕಾರು ಬಿಟ್ಟಿದ್ದರು. ಮೂರು ತಿಂಗಳ ಕಾರಿನ ಬಾಡಿಗೆ ಬಿಲ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಕಚೇರಿಯಲ್ಲಿ ಲಂಚ ಪಡೆಯುವಾಗ ದಾಳಿ ನಡೆಸಿ ಬಂಧಿಸಲಾಗಿದೆ.: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಶಿವರಾಜ್ ಎನ್. ಎಲಿಗಾರ್ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ಬುಧವಾರ ಕಚೇರಿಯಲ್ಲಿ 34 ಸಾವಿರ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ ಮಂಜುನಾಥ್ ಮತ್ತು ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.ಇನ್ಸ್’ಪೆಕ್ಟರ್ ಗಳಾದ ಸಲೀಂ, ರಾಮರೆಡ್ಡಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು

Related News

spot_img

Revenue Alerts

spot_img

News

spot_img