Revenue Facts

ಗೌರವಧನ ಮಂಜೂರು ಮಾಡಲು 10 ಸಾವಿರ ಲಂಚ ಪಡೆಯುವಾಗ ಜಿಲ್ಲಾ ಅಧಿಕಾರಿಸೇರಿ ಮೂವರು ಲೋಕಾಯುಕ್ತ ಬಲೆಗೆ

ಗೌರವಧನ ಮಂಜೂರು ಮಾಡಲು 10 ಸಾವಿರ ಲಂಚ  ಪಡೆಯುವಾಗ ಜಿಲ್ಲಾ ಅಧಿಕಾರಿಸೇರಿ  ಮೂವರು   ಲೋಕಾಯುಕ್ತ ಬಲೆಗೆ

ಕಲಬುರಗಿ:ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿಯಲ್ಲಿ ಗ್ರಾಮೀಣ ವಿಕಲಚೇತನ ಪುನರ್ವಸತಿ ಕಾರ್ಯಕರ್ತನ ಗೌರವಧನ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ವೆಂಕಟೇಶ ದೇಶಪಾಂಡೆ ಸೇರಿದಂತೆ ಮೂವರನ್ನು ಶುಕ್ರವಾರ ಸಂಜೆ ಬಂಧಿಸಿದ್ದಾರೆ.

ಜೇವರ್ಗಿ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಅಧಿಕಾರಿ ನಾನಾಗೌಡ ಹೊನ್ನಳ್ಳಿ ಹಾಗೂ ಪ್ರಥಮ ದರ್ಜೆ ಸಹಾಯಕ ಅಮರೇಶ ನಾಯಕ ಬಂಧನಕ್ಕೊಳಗಾದ ಇತರ ಇಬ್ಬರು ಸಿಬ್ಬಂದಿ.ಮಾಸಿಕ ₹ 9 ಸಾವಿರದಂತೆ ಎಂಟು ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿತ್ತು. ಇದನ್ನು ಬಿಡುಗಡೆ ಮಾಡಬೇಕಾದರೆ ₹ 10 ಸಾವಿರ ಲಂಚ ನೀಡುವಂತೆ ವೆಂಕಟೇಶ ದೇಶಪಾಂಡೆ ಹಾಗೂ ಇತರರು ಗುರುರಾಜ ಅವರಿಗೆ ಸೂಚಿಸಿದ್ದರು.ವಾರದ ಹಿಂದೆ ಗೌರವಧನವನ್ನು ಬಿಡುಗಡೆ ಮಾಡಲಾಗಿತ್ತು. ಮೊದಲೇ ಒಪ್ಪಿಕೊಂಡಂತೆ ₹ 10 ಸಾವಿರ ಲಂಚದ ಹಣವನ್ನು ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದ ಎದುರಿಗೆ ಇರುವ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ತಲುಪಿಸುವ ಸಂದರ್ಭದಲ್ಲಿ ವೆಂಕಟೇಶ ದೇಶಪಾಂಡೆ, ನಾನಾಗೌಡ ಹೊನ್ನಳ್ಳಿ ಹಾಗು ಅಮರೇಶ ನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್ ಅವರ ನೇತೃತ್ವದಲ್ಲಿ ಈವಿಚಾರಣೆ ನಡೆಯಿತು.

Exit mobile version