Revenue Facts

One nation one Election;ಒಂದು ದೇಶ, ಒಂದು ಚುನಾವಣೆ,ಸೆಪ್ಟೆಂಬರ್ 23 ರಂದು ಮೊದಲ ಸಭೆ

ಭುವನೇಶ್ವರ;ಒಂದು ರಾಷ್ಟ್ರ, ಒಂದು ಚುನಾವಣೆ – ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಎಂಟು ಸದಸ್ಯರ ಸಮಿತಿ ರಚಿಸಿದೆ.23ಕ್ಕೆ ಸಭೆ ‘ಒಂದು ದೇಶ, ಒಂದು ಚುನಾವಣೆ’ ನೀತಿಯನ್ನು ಪರಿಶೀಲಿಸಲು ರಚಿಸಲಾಗಿರುವ ಸಮಿತಿಯ ಮೊದಲ ಸಭೆ ಇದೇ 23ರಂದು ನಡೆಯಲಿದೆ. ಇದಕ್ಕಾಗಿ ಸಂವಿಧಾನದಲ್ಲಿ ಮಾಡಬೇಕಾದ ತಿದ್ದುಪಡಿಗಳು ಮತ್ತು ಸಂಬಂಧಿತ ಕಾನೂನುಗಳಲ್ಲಿ ಬದಲಾವಣೆಗಳನ್ನು ಕೇಂದ್ರಕ್ಕೆ ಶಿಫಾರಸು ಮಾಡಲಾಗುತ್ತದೆ,ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ.ಸಮಿತಿಯು ಅವಿಶ್ವಾಸ ನಿರ್ಣಯದ ಅಂಗೀಕಾರ, ಪಕ್ಷಾಂತರ ಅಥವಾ ಏಕಕಾಲಿಕ ಚುನಾವಣೆಯ ಸಂದರ್ಭದಲ್ಲಿ ಯಾವುದೇ ಇತರ ಘಟನೆಗಳಂತಹ ಸನ್ನಿವೇಶಗಳಿಗೆ ಸಂಭವನೀಯ ಪರಿಹಾರಗಳನ್ನು ವಿಶ್ಲೇಷಿಸುತ್ತದೆ ಮತ್ತು ಶಿಫಾರಸು ಮಾಡುತ್ತದೆ.

Exit mobile version