22.6 C
Bengaluru
Saturday, July 27, 2024

ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ,ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

#Draupadi Murmu #visited #banglore #today

ರಾಷ್ಟ್ರಪತಿ ದೌಪದಿ ಮುರ್ಮು(Droupadi Murmu) ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಬನ್ನೇರುಘಟ್ಟ ರಸ್ತೆಯಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸುವರ್ಣ ಮಹೋತ್ಸವದ(Golden Jubilee Foundation Week) ಅಂಗವಾಗಿ ರಾಷ್ಟ್ರಪತಿಗಳು ಗುರುವಾರ ಬೆಂಗಳೂರಿನಲ್ಲಿ ಸಂಸ್ಥಾಪನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು ಬೆಂಗಳೂರಿನ ಐಐಎಂ(IIM)ನಲ್ಲಿ ಎನ್ ಎಸ್ ರಾಘವನ್ ಉದ್ಯಮಶೀಲತಾ ಕಲಿಕೆ ಕೇಂದ್ರದ ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿಗಳು ತೆರಳುವ ಮಾರ್ಗದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಯಾವುದೇ ಘಟನೆಗಳು ನಡೆಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ.6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.ಅಕ್ಟೋಬರ್ 27 ರಂದು ಮುರ್ಮು ಅವರು ತಮಿಳುನಾಡಿನ ಚೆನ್ನೈನಲ್ಲಿ ಇಂಡಿಯನ್ ಮ್ಯಾರಿಟೈಮ್ ವಿಶ್ವವಿದ್ಯಾಲಯದ 8 ನೇ ಘಟಿಕೋತ್ಸವವನ್ನು ಅಲಂಕರಿಸಲಿದ್ದಾರೆ.ಚೆನ್ನೈನಲ್ಲಿ ಇಂಡಿಯನ್ ಮ್ಯಾರಿಟೈಮ್ ವಿಶ್ವವಿದ್ಯಾಲಯದ 8 ನೇ ಘಟಿಕೋತ್ಸವ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ದ್ರಬುಪತಿ ಮುರ್ಮು ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಗೌರವಿಸಲಿದ್ದಾ

Related News

spot_img

Revenue Alerts

spot_img

News

spot_img