22.9 C
Bengaluru
Friday, July 5, 2024

” ಮೈಸೂರಿನತ್ತ ಸುಳಿಯದ ವರುಣ: ಇಂದು ಕೆ.ಆರ್.ಎಸ್ ನಲ್ಲಿ ಹೋಮ ಮತ್ತು ವಿಶೇಷ ಪೂಜೆ:

ಮೈಸೂರು: ಜೂನ್-13:
ಬೆಂಗಳೂರು ಹಾಗೂ ಸುತ್ತಮುತ್ತಲಿನ ಕಡಟೆಗಳಲ್ಲಿ ವರುಣನ ಆರ್ಭಟದಿಂದ ರಸ್ತೆಗಳೆಲ್ಲ ತುಂಬಿ ಅವಾಂತರಗಳೆ ಸೃಷ್ಟಿಯಾಗಿದ್ದು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರಿನ ಪ್ರವೇಶದ ಅನುಭವವೇ ಇಲ್ಲದಂತಾಗಿದೆ. ಈಗಾಗಿ ಮೈಸೂರಿನ ಜೀವನಾಡಿ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ 12.152 ಟಿಎಂಸಿ ಇದ್ದು ಗರಿಷ್ಟ ಮಟ್ಟ ತಲುಪದೆ ಇರುವುದು ಆತಂಕಕ್ಕೆ ಕಾರಣವಾಗಿದೆ. ಇದಕ್ಕಾಗಿ KRSನಲ್ಲಿ ಹೋಮ ಮತ್ತು ವಿಶೇಷ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ವೈದಿಕ ಭಾನುಪ್ರಕಾಶ ಶರ್ಮಾ ಅವರ ಮುಂದಾಳತ್ವದಲ್ಲಿ 12 ವೈದಿಕರ ತಂಡ ಧಾರ್ಮಿಕ ಕಾರ್ಯಗಳನ್ನು ನಡೆಸಿಕೊಡಲಿದೆ. ಇದೇ ದಿನ ಜೂನ್ 13ರಂದು ಈ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು KRS ಡ್ಯಾಂ ಬಳಿ ಜರುಗಲಿವೆ ಎನ್ನಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಭಾಗದಲ್ಲಿಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗಾಳಿಯ ವೇಗ ಗಂಟೆಗೆ 40 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ.
ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ನಗರ ಪಾಲಿಕೆಯನ್ನು ವಿಭಜಿಸಲು ಕರ್ನಾಟಕ ಸರ್ಕಾರ ಮುಂದಾಗಿದ್ದು, ಇದಕ್ಕೂ ಮುನ್ನ ಇದ್ದ ಬಿಎಸ್ ಪಾಟೀಲ್ ತಜ್ಞರ ಸಮಿತಿಯನ್ನು ಪುನರ್ ರಚನೆ ಮಾಡಿ ಆದೇಶಿಸಿದೆ. ಅಲ್ಲದೆ, ನಿಗದಿತ ಸಮಯದಲ್ಲಿ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಪಾಲಿಕೆಯನ್ನು ಪುನರ್ ರಚಿಸಲು ಸರ್ಕಾರ ತೀರ್ಮಾನಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈ ಹಿಂದೆ ರಚಿಸಲಾಗಿತ್ತು. ಇದಕ್ಕೆ ಮುಂದುವರೆದಂತೆ, ಪ್ರಸ್ತುತ ಪಾಲಿಕೆಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಬಿಎಸ್​ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈಗ ಪುನರ್ ರಚಿಸಲು ಸರ್ಕಾರವು ತೀರ್ಮಾನಿಸಿದೆ. ಅದರಂತೆ ಪಾಟೀಲ್ ಅಧ್ಯಕ್ಷತೆಯ ಸಮಿತಿಯಲ್ಲಿ ಬಿಬಿಎಂಪಿ ನಿವೃತ್ತ ಆಯುಕ್ತ ಸಿದ್ದಯ್ಯ ಮತ್ತು ಹಿಂದಿನ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್​ ಸದಸ್ಯ ರವಿಚಂದರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಸಮಿತಿಯು ಬಿಬಿಎಂಪಿ ಪುನರ್ ರಚನೆ ಸಂಬಂಧ ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಪಾಲಿಕೆ ವಿಶೇಷ ಆಯುಕ್ತರು (ಆಡಳಿತ) ಸಮಿತಿಗೆ ಬೇಕಾದ ಅಗತ್ಯ ಮಾಹಿತಿಯನ್ನು ಒದಗಿಸಬೇಕು ಮತ್ತು ತತ್ಸಬಂಧ ಕರೆಯಬೇಕಾಗಿರುವ ಸಭೆಗಳ ಬಗ್ಗೆ ಸೂಕ್ತವಾಗಿ ಸಮನ್ವಯ ಕಾರ್ಯ ನಿರ್ವಹಿಸಬೇಕು. ಸಮಿತಿಗೆ ಉತ್ತಮ ಕಚೇರಿ, ಕೊಠಡಿ, ಅಗ್ಯತ್ಯ ಸಿಬ್ಬಂದಿ, ಪೀಠೋಪಕರಣಗಳು, ವಾಹನ ಸೌಲಭ್ಯ ಸೇರಿದಂತೆ ಇನ್ನಿತರ ಅವಶ್ಯ ಸೌಲಭ್ಯ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್​ಎಸ್​ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Related News

spot_img

Revenue Alerts

spot_img

News

spot_img