22.9 C
Bengaluru
Saturday, July 6, 2024

ಪಡಿತರ ಚೀಟಿ : ಪಡಿತರ ಚೀಟಿದಾರರಿಗೆ ಸಂತಸದ ಸುದ್ದಿ,

ಉಚಿತ ಪಡಿತರ ಚೀಟಿ ಯೋಜನೆ ಫಲಾನುಭವಿಗಳಿಗೆ ಸರ್ಕಾರ ಭರ್ಜರಿ ಸುದ್ದಿ ತರಲಿದೆ. ಉಚಿತ ಪಡಿತರ ಯೋಜನೆಯ ಲಾಭವನ್ನು ಪಡೆಯುತ್ತಿರುವ ನಾಗರಿಕರಿಗೆ, ಈ ಸುದ್ದಿಯನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಏಕೆಂದರೆ ಉಚಿತ ಪಡಿತರ ಯೋಜನೆಗೆ ಸಂಬಂಧಿಸಿದ ನಾಗರಿಕರಿಗೆ ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲು ಸರ್ಕಾರವು ಈಗ ಕೆಲವು ವಿಶೇಷ ಯೋಜನೆಗಳನ್ನು ಮಾಡುತ್ತಿದೆ. ಇದರಲ್ಲಿ ಅವರು ಯೋಜನೆಯಡಿ ಬಡ ಕುಟುಂಬಗಳಿಗೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಬಹುದು. .

ಕೋಟ್ಯಂತರ ಮಂದಿ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಮತ್ತೊಂದು ಸಂತಸದ ಸುದ್ದಿ ನೀಡಿದೆ.269 ​​ಜಿಲ್ಲೆಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಫೋರ್ಟಿಫೈಡ್ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಕೇಂದ್ರ ಸರ್ಕಾರದ ವಿಶಿಷ್ಟ ಮತ್ತು ಯಶಸ್ವಿ ಉಪಕ್ರಮವಾದ ಸಾರವರ್ಧಿತ ಅಕ್ಕಿ ವಿತರಣೆಯನ್ನು ಕಳೆದ ಎರಡು ಹಂತಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ,ಮಕ್ಕಳು ಮತ್ತು ಮಹಿಳೆಯರಲ್ಲಿ ರಕ್ತಹೀನತೆಯ ಸಮಸ್ಯೆಯನ್ನು ಹೋಗಲಾಡಿಸಲು, ಮೈಕ್ರೋನ್ಯೂಟ್ರಿಯಂಟ್‌ಗಳನ್ನು ಒಳಗೊಂಡಿರುವ ಸಾರವರ್ಧಿತ ಅಕ್ಕಿ ವಿತರಣೆಯ ಯೋಜನೆಯನ್ನು ಹಂತ ಹಂತವಾಗಿ ಅಕ್ಟೋಬರ್ 2021 ರಲ್ಲಿ ಪ್ರಸ್ತಾವನೆ ಮಾಡಲಾಯಿತು,

2024 ರ ವೇಳೆಗೆ ಸರ್ಕಾರದ ಯೋಜನೆಗಳ ಮೂಲಕ ದೇಶದಾದ್ಯಂತ ಸಾರವರ್ಧಿತ ಅಕ್ಕಿಯನ್ನು ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು 2021 ರಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ‘ಕೇಂದ್ರ ಸರ್ಕಾರದ ವಿಶಿಷ್ಟ ಹಾಗೂ ಅತ್ಯಂತ ಯಶಸ್ವಿ ಉಪಕ್ರಮ ಇದಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಉತ್ತಮ ಫಲಿತಾಂಶ ನೀಡಿದೆ. ಸಾರ್ವಜನಿಕರಿಂದಲೂ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದಲ್ಲಿ ಸುಮಾರು 735 ಜಿಲ್ಲೆಗಳಿದ್ದು, ಈ ಪೈಕಿ ಶೇ.80ಕ್ಕೂ ಹೆಚ್ಚಿನ ಮಂದಿ ಈ ಅನ್ನವನ್ನೇ ಅವಲಂಬಿತರಾಗಿದ್ದಾರೆ. ಸದ್ಯಕ್ಕೆ ಈ ಅಕ್ಕಿಯ ಉತ್ಪಾದನಾ ಸಾಮರ್ಥ್ಯ ಸುಮಾರು 17 ಲಕ್ಷ ಟನ್‌ಗಳಷ್ಟಿರುವುದರಿಂದ ದೇಶದಲ್ಲಿ ಸಾಕಷ್ಟು ಸಾರವರ್ಧಿತ ಅಕ್ಕಿ ಇದೆ ಎಂದು ಚೋಪ್ರಾ ಅವರು ಮಾಹಿತಿ ನೀಡಿದ್ದಾರೆ. ಉಳಿದ ಜಿಲ್ಲೆಗಳಿಗೂ ಯೋಜನೆಯ ವ್ಯಾಪ್ತಿಯನ್ನು ವಿಸ್ತರಣೆ ಮಾಡುವ ಯೋಜನೆ ರೂಪಿಸಲಾಗಿದೆ.

Related News

spot_img

Revenue Alerts

spot_img

News

spot_img