Revenue Facts

ಡಿ. 26 ರಿಂದ ಯೋಜನೆಗೆ ನೋಂದಣಿ ಆರಂಭ…!

ಶಿವಮೊಗ್ಗ: ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಯುವ ನಿಧಿ ಗ್ಯಾರಂಟಿ ಯೋಜನೆಗೆ ಜ.12 ರಂದು ಚಾಲನೆ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಜ.12 ರಂದು ನಗರದ ಪ್ರೀಡಂ ಪಾರ್ಕ್ ನಲ್ಲಿ ಯುವ ನಿಧಿ ಗ್ಯಾರಂಟಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.

ನೋಂದಣಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಿ ..!

ಡಿ. 26 ರಿಂದ ಯೋಜನೆಗೆ ನೋಂದಣಿ ಆರಂಭವಾಗಲಿದೆ. ನೋಂದಣಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಿ ಸೌಲಭ್ಯ ಪಡೆಯಬೇಕು. ಯುವನಿಧಿ ಯೋಜನೆಯು ರಾಜ್ಯ ಮಟ್ಟದ ಕಾರ್ಯಕ್ರಮವಾಗಿರುವುದರಿಂದ ಇದು ದೊಡ್ಡಮಟ್ಟದಲ್ಲಿ ನಡೆಯಲಿದೆ. ಯುವನಿಧಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ಕೇಳಿಬರುತ್ತಿದೆ.

ಚೈತನ್ಯ ರೆವೆನ್ಯೂ ಫ್ಯಾಕ್ಟ್ ನ್ಯೂಸ್. ಬೆಂಗಳೂರು

Exit mobile version