20 C
Bengaluru
Tuesday, July 9, 2024

“ಅಯೋಧ್ಯಾ ರಾಮನ ವಿಗ್ರಹಕ್ಕೆ ನೇಪಾಳದಿಂದ ಬಂದ ಶಾಲಿಗ್ರಾಮ ಕಲ್ಲುಗಳು”:

ಅಯೋಧ್ಯೆಯ ರಾಮಮಂದಿರಕ್ಕಾಗಿ ನೇಪಾಳದಿಂದ ರವಾನೆಯಾದ ಎರಡು ಶಾಲಿಗ್ರಾಮ್ (ಹಿಂದೂ ಧರ್ಮದಲ್ಲಿ ಭಗವಾನ್ ವಿಷ್ಣುವಿನ ಮಾನವರೂಪವಲ್ಲದ ಪ್ರಾತಿನಿಧ್ಯಗಳು) ಕಲ್ಲುಗಳು ಇಂದು ತಮ್ಮ ಗಮ್ಯಸ್ಥಾನವನ್ನು ತಲುಪಿವೆ. ಇವುಗಳನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಹಸ್ತಾಂತರಿಸುವ ಮೊದಲು ಭಗವಾನ್ ರಾಮನ ಜನ್ಮಸ್ಥಳದಲ್ಲಿ ಅರ್ಚಕರು ಮತ್ತು ಸ್ಥಳೀಯರು ಹೂಮಾಲೆಯಿಂದ ಅಲಂಕರಿಸಿ ಧಾರ್ಮಿಕ ವಿಧಿಗಳನ್ನು ಅರ್ಪಿಸುವ ಮೂಲಕ ಸ್ವಾಗತಿಸಿ ಸಂಭ್ರಮಿಸಿದ್ದಾರೆ.

ಈ ಬಂಡೆಗಳನ್ನು ರಾಮ ಮತ್ತು ಜಾನಕಿ ಮೂರ್ತಿಗಳ ನಿರ್ಮಾಣಕ್ಕೆ ಬಳಸಿಕೊಳ್ಳುವ ನಿರೀಕ್ಷೆ ಇದ್ದು, ನಿರ್ಮಾಣ ಹಂತದಲ್ಲಿರುವ ರಾಮಮಂದಿರದ ಮುಖ್ಯ ದೇವಾಲಯದ ಸಂಕೀರ್ಣದಲ್ಲಿ ಇದನ್ನು ಇರಿಸಲಾಗುವುದು.
ಮಯಾಗಡಿ ಮತ್ತು ಮುಸ್ತಾಂಗ್ ಜಿಲ್ಲೆಗಳ ಮೂಲಕ ಹರಿಯುವ ಪವಿತ್ರ ಕಾಳಿ ಗಂಡಕಿ ನದಿಯ ದಡದಲ್ಲಿ ಮಾತ್ರ ಕಂಡುಬರುವ ಈ ಶಾಲಿಗ್ರಾಮ ಕಲ್ಲುಗಳು ಸೀತೆಯ ಜನ್ಮಸ್ಥಳವಾದ ನೇಪಾಳದ ಜನಕ್ಪುರದಿಂದ ಭಾರೀ ಟ್ರಕ್ಗಳಲ್ಲಿ ಅಯೋಧ್ಯೇಯನ್ನು ತಲುಪಿವೆ. ಶಾಲಿಗ್ರಾಮಗಳು ಬುಧವಾರ ಗೋರಖ್ಪುರ ತಲುಪಿದ್ದು, ಅಲ್ಲಿ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ತೆರೆಯಲಾಗಿತ್ತು.

ಎರಡು ಬಂಡೆಗಳು ಸುಮಾರು 30 ಟನ್ ತೂಕವನ್ನು ಹೊಂದಿವೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಎರಡು ಪವಿತ್ರ ಕಲ್ಲುಗಳು, ಒಂದು 18 ಟನ್ ತೂಕ ಮತ್ತು ಇನ್ನೊಂದು 16 ಟನ್, ವಿಗ್ರಹವನ್ನು ತಯಾರಿಸಲು ತಾಂತ್ರಿಕವಾಗಿ ಮತ್ತು ವೈಜ್ಞಾನಿಕವಾಗಿ ಅನುಮೋದಿಸಲಾಗಿದೆ ಎಂದು ನೇಪಾಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related News

spot_img

Revenue Alerts

spot_img

News

spot_img