Revenue Facts

ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿದ ಸುಪ್ರೀಂ

#Supreme Court #ordered # release #water # Tamil Nadu

ನವದೆಹಲಿ;ನಿತ್ಯವೂ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಕಾವೇರಿ ನಿಯಂತ್ರಣ ಆಯೋಗ & ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಎತ್ತಿಹಿಡಿದೆ. ಹೀಗಾಗಿ ಬರ ಪರಿಸ್ಥಿತಿ ನಡುವೆ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ,
ಕಾವೇರಿ ನೀರು ವಿಚಾರದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಮುಕುಲ್ ರೋಹಟಗಿ ಹಾಗೂ ಶ್ಯಾಮ್ ದಿವಾನ್ ವಾದಗಳನ್ನು ಆಲಿಸಿದ ನ್ಯಾ.ಗವಾಯಿ ನೇತೃತ್ವದ ಪೀಠ, ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಬಿಡಬೇಕು. 15 ದಿನಗಳಿಗೊಮ್ಮೆ ಕಾವೇರಿ ಪ್ರಾಧಿಕಾರ ಸಭೆ ನಡೆಸಬೇಕೆಂದು ಎಂದು ಆದೇಶ ನೀಡಿದೆ.ಕಾವೇರಿ ಜಲ ಹಂಚಿಕೆ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮಂಡಿಸಿದ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ತೀರ್ಪು ತಮಿಳು ನಾಡು ಪರವಾಗಿದೆ.

Exit mobile version