ಬಳ್ಳಾರಿಗೆ ಭೇಟಿ ನೀಡುವಂತೆ ಜನಾರ್ಧನ್ ರೆಡ್ಡಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್.

0
110

ಬೆಂಗಳೂರು. ಏ.20: ಗಣಿ ಉದ್ಯಮಿ ಹಾಗೂ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಭೇಟಿ ನೀಡಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ರೆಡ್ಡಿ ಸಲ್ಲಿಸಿದ್ದ ಹೊಸ ಅರ್ಜಿಯನ್ನು ಪರಿಗಣಿಸಲು ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರ ಪೀಠ ನಿರಾಕರಿಸಿದೆ.

ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮೀನಾಕ್ಷಿ ಅರೋರಾ, ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೊಮ್ಮಗಳ ಜನನಕ್ಕಾಗಿ ಬಳ್ಳಾರಿಗೆ ಭೇಟಿ ನೀಡಲು ಅವಕಾಶ ನೀಡುವ ಹಿಂದಿನ ಸಡಿಲಿಕೆಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿದರು.

ಜನವರಿ 21, 2015 ರಂದು ಸುಪ್ರೀಂ ಕೋರ್ಟ್ ನೀಡಿದ ಜಾಮೀನಿನ ಷರತ್ತುಗಳ ಪ್ರಕಾರ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವಂತಿಲ್ಲ.