23.9 C
Bengaluru
Sunday, February 23, 2025

ಬಿಬಿಎಂಪಿ ಕಂದಾಯ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೂವರು ಕಂದಾಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶ ಹೊರಡಿಸಲಾಗಿದೆ.

ಬಿಬಿಎಂಪಿ ಆಡಳಿತಗಾರರ ಆಪ್ತಶಾಖೆ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಟಿ. ಶ್ರೀನಿವಾಸ ಅವರನ್ನು ಕಂದಾಯ ಅಧಿಕಾರಿ (ಮಹದೇವಪುರ) ಹಾಗೂ ಮತದಾರರ ನೋಂದಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಬಿಬಿಎಂಪಿ ಸಹಾಯಕ ಆಯುಕ್ತ (ಪಶ್ಚಿಮ- ಆಡಳಿತ) ಎಸ್. ಈಶ್ವರ ಅವರನ್ನು ಕಂದಾಯ ಅಧಿಕಾರಿ (ಶಿವಾಜಿನಗರ) ಹಾಗೂ ಮತದಾರರ ನೋಂದಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಬಿಬಿಎಂಪಿ ಸಹಾಯಕ ಆಯುಕ್ತೆ (ರಾಜರಾಜೇಶ್ವರಿ ನಗರ- ಆಡಳಿತ) ಎನ್ ಉಮಾ ಅವರನ್ನು ಕಂದಾಯ ಅಧಿಕಾರಿ (ಚಿಕ್ಕಪೇಟೆ) ಹಾಗೂ ಮತದಾರರ ನೋಂದಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

Related News

spot_img

Revenue Alerts

spot_img

News

spot_img