25.4 C
Bengaluru
Saturday, July 27, 2024

ವಿಧಾನಸಭೆ ಸ್ಪೀಕರ್​ ಸ್ಥಾನಕ್ಕೆ ಯು ಟಿ ಖಾದರ್​ ಆಯ್ಕೆ

ಬೆಂಗಳೂರು ಮೇ 24;ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಸರ್ವಾನುಮತದಿಂದ ಯು ಟಿ ಖಾದರ್ ಅವರು ಬುಧವಾರ ಆಯ್ಕೆಯಾಗಿದ್ದಾರೆ.ಯು.ಟಿ. ಖಾದರ್ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಮೊದಲ ಮುಸ್ಲಿಂ ನಾಯಕರಾಗಿದ್ದಾರೆ,ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಬೆಂಬಲಿಸಿದ್ದಾರೆ. ಆ ಸ್ಥಾನಕ್ಕೆ ಬೇರೆ ಯಾರೂ ಆಕಾಂಕ್ಷಿಗಳಿಲ್ಲದ ಕಾರಣ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರು ಮುಖ್ಯಮಂತ್ರಿಗಳ ಪ್ರಸ್ತಾವನೆಯನ್ನು ಮುಂದಿಟ್ಟರು.ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಬೆಂಬಲಿಸಿದ್ದಾರೆ. ಆ ಸ್ಥಾನಕ್ಕೆ ಬೇರೆ ಯಾರೂ ಆಕಾಂಕ್ಷಿಗಳಿಲ್ಲದ ಕಾರಣ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರು ಮುಖ್ಯಮಂತ್ರಿಗಳ ಪ್ರಸ್ತಾವನೆಯನ್ನು ಮುಂದಿಟ್ಟರು.

ಆಡಳಿತ ಪಕ್ಷದ ನಾಮನಿರ್ದೇಶಿತರನ್ನು ಸಾಮಾನ್ಯವಾಗಿ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಸಭಾಧ್ಯಕ್ಷರಾದ ಎರಡನೇ ಜನಪ್ರತಿನಿಧಿ ಖಾದರ್ ಆಗಿದ್ದಾರೆ. ಇದರಂತೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಿಂದ ಈ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಹಿಂದೆ ಬೆಳ್ತಂಗಡಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿ. ವೈಕುಂಠ ಬಾಳಿಗಾ ಎರಡು ಬಾರಿ ಸಭಾಧ್ಯಕ್ಷರಾಗಿದ್ದರು.

Related News

spot_img

Revenue Alerts

spot_img

News

spot_img