22.9 C
Bengaluru
Saturday, July 6, 2024

ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ…

ಕಲ್ಬುರ್ಗಿ;ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು ಗ್ರಾಮ ಪಂಚಾಯತಿಯ ಬಿಲ್‌ ಕಲೆಕ್ಟರ್ ಮೂರು ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಬಸವ ವಸತಿ ಯೋಜನೆಯಡಿ ಫಲಾನುಭವಿಯೊಬ್ಬರ ಮನೆಯ ಜಿಪಿಎಸ್(GPS) ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು ₹ 3 ಸಾವಿರ ಲಂಚ ಪಡೆಯುತ್ತಿದ್ದ ಜೇವರ್ಗಿ ತಾಲ್ಲೂಕಿನ ಹರನೂರು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಬಾಬುರಾವ ಯಲಗೂರದಪ್ಪ ಎಂಬುವವರನ್ನು ಲೋಕಾಯುಕ್ತ(Lokayukta) ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಲಂಚ ಸ್ವೀಕರಿಸುವಾಗ ಬಿಲ್ ಕಲೆಕ್ಟರ್ ಬಾಬುರಾವ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ರಾಜೀವ್ ಗಾಂಧಿ ಅವಾಸ್ ಯೋಜನೆ ಅಡಿಯಲ್ಲಿ ಮನೆ ಜಿಪಿಎಸ್(GPS) ಮತ್ತು ಖಾತಾ ಏರಿಸಲು ಮೂರು ಸಾವಿರ ರೂ. ಬೇಡಿಕೆ ಇಟ್ಟಿದ್ದ. ಆ ಹಣವನ್ನು ನಾಗಣ್ಣ ಗೌಡ ಎಂಬುವವರ ಬಳಿ ಶುಕ್ರವಾರ ಸಂಜೆ ವಿಜಯಪುರ ಕ್ರಾಸ್ ಬಳಿಯಲ್ಲಿ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.ಗ್ರಾಮದ ಈರಮ್ಮ ಅಯ್ಯಣ್ಣ ಮಡಿವಾಳ ಎಂಬುವವರಿಗೆ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅನುದಾನ ಮಂಜೂರಾಗಿತ್ತು. ಕೊನೆಯ ಕಂತು ₹ 30 ಸಾವಿರ ಬಾಕಿ ಇತ್ತು. ಇದಕ್ಕೆ ಜಿಪಿಎಸ್ ಮಾಡಿ ದಾಖಲೆಗಳನ್ನು ಅಪ್‌ಲೋಡ್ ಮಾಡಿಕೊಡುವುದಾಗಿ ಬಿಲ್ ಕಲೆಕ್ಟರ್ ಬಾಬುರಾವ ಹೇಳಿದ್ದ. ಇದಕ್ಕೆ ಪ್ರತಿಯಾಗಿ ₹ 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಕುರಿತು ನಾಗನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಜೇವರ್ಗಿ ಪಟ್ಟಣದ ಎಪಿಎಂಸಿ ಬಳಿಯ ನರಿಬೋಳ ಕ್ರಾಸ್‌ನಲ್ಲಿ ನಾಗನಗೌಡ ಅವರು ಹಣ ನೀಡುವುದಾಗಿ ಈರಮ್ಮ ಬಾಬುರಾವಗೆ ತಿಳಿಸಿದ್ದರು. ಅದರಂತೆ ಲಂಚದ ಹಣವನ್ನು ತಲುಪಿಸುವಷ್ಟರಲ್ಲಿ ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ನಾನಾಗೌಡ ಪಾಟೀಲ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿತು.ಲೋಕಾಯುಕ್ತ(Lokayukta) ಎಸ್ಪಿ ಎ.ಆರ್. ಕರ್ನೂಲ್, ಡಿವೈಎಸ್ಪಿ ಗೀತಾ ಬೇನಾಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಹಣಮಂತರಾಯ ಹತ್ತಿ, ಮಸೂದ್ ಎಚ್.ಸಿ. ಶರಣಬಸವ, ಮಲ್ಲಿನಾಥ, ಅನಿಲ್, ಕನ್ಹಯ್ಯ ತಿವಾರಿ ಭಾಗವಹಿಸಿದ್ದರು

Related News

spot_img

Revenue Alerts

spot_img

News

spot_img